ಕುರಾನಿನಿಂದ ಮರೆಯಾದ ಆಯತ್ತುಗಳು!

ಕುರಾನ್ ಇಸ್ಲಾಮಿನ ಅತ್ಯಂತ ಪ್ರಾಮಾಣಿಕ ಆಧಾರ.  ಅದು ಯಾರ ಹಸ್ತಕ್ಷೇಪಕ್ಕೂ ಒಳಗಾಗಿಲ್ಲ. ಅದು ಎಂದೂ ಬದಲಾಗಿಲ್ಲ. ಅದರಲ್ಲಿ ಒಂದು ಅಕ್ಷರವೂ ಬದಲಾಗದೆ ಉಳಿದುಬಂದಿದೆ ಎನ್ನುವ ತಪ್ಪು ಕಲ್ಪನೆ ಮುಸ್ಲಿಮರಲ್ಲಿದೇ. ಇದು ಸುಳ್ಳು.

ವಿವಾಹಿತ ವ್ಯಬಿಚಾರಿಗಳನ್ನು  ಕಲ್ಲೆಸೆದು ಕೊಲ್ಲಬೇಕೆಂಬ ಆಯತ್ ಇಂದಿನ ಕುರಾನಿನಲ್ಲಿ ಇಲ್ಲ. (ಇಂದಿನ ಕುರಾನಿನಲ್ಲಿ ವ್ಯಭಿಚಾರಿಗಳಿಗೆ ಬೇರೆಯೇ ಶಿಕ್ಷೆ ಇದೆ. ಕ್ಷಮೆ ನೀಡಲೂ ಅವಕಾಶವಿದೆ!)
ಹಾಗೆಯೇ, ಅನ್ಯ ಪುರುಷರನ್ನು ಮಹರಂ ಮಾಡಲು ಅವರಿಗೆ ಹತ್ತು ಬಾರಿ ಸ್ತನಪಾನ ಮಾಡಿಸಬೇಕೆಂಬ ಆಯತ್ ಕೂಡ ಇಂದಿನ ಕುರಾನಿನಲ್ಲಿ ಇಲ್ಲ. (ಸ್ತನಪಾನದ ಬಗ್ಗೆ ನನ್ನ ಹಿಂದಿನ ಪೋಸ್ಟ್ ನೋಡಿ)
ಆದರೆ ಅಂದಿನ ಕುರಾನಿನಲ್ಲಿ ವ್ಯಭಿಚಾರಿಗಳನ್ನು ಕಲ್ಲೆಸೆದು ಕೊಲ್ಲಬೇಕೆಂಬ ಆಯತ್ ಇದ್ದಿರಲೇಬೇಕು.(ಇತ್ತೆಂದು ಹೇಳಿರುವುದು ನಾವಲ್ಲ; ಪ್ರವಾದಿ  ಪತ್ನಿಯೂ ಉಮಾತುಲ್ ಮೂಮಿನೀನ್  ಆಯಿಷಾ ರವರಾಗಿದ್ದಾರೆ. ಅದನ್ನು ಉಲ್ಲೇಖಿಸಿರುವುದು ಇಮಾಮ್ ಮುಸ್ಲಿಂ, ಇಮಾಮ ಬುಕಾರಿ, ಇಮಾಮ ಇಬ್ನ್ ಮಾಜಾ ರಂತಹ ಶ್ರೇಷ್ಠ ವಿದ್ವಾಂಸರಾಗಿದ್ದಾರೆ )

ಯಾಕೆಂದರೆ ಪ್ರವಾದಿಯವರು ವ್ಯಭಿಚಾರಿಗಳನ್ನು ಖುದ್ದು ಕಲ್ಲೆಸೆದು ಕೊಲ್ಲಿಸಿದ್ದರು. (ಬುಕಾರಿ 5270 ,2314, 2315 , ಸಹಿ ಮುಸ್ಲಿಂ 1695 b)* *ಮತ್ತು ಕಲ್ಲು  ಎಸೆದು ಕೊಲ್ಲುವಂತೆ (ಕಿತಾಬುಲ್ಲಾ-ಅಲ್ಲಾಹನ ಗ್ರಂಥದ ಆಧಾರದಲ್ಲಿ) ತೀರ್ಪು ಸಹ ನೀಡಿದ್ದರು.( ಸಹಿ ಬುಖಾರಿ 2695,2696 )

ಅಂದು ಅಂತಹ ಆಯತ್ ಇರದೇ, ಪ್ರವಾದಿಯವರು ಹದ್ದು ಮೀರಿ ಇಂತಹ ಕ್ರೂರ ಶಿಕ್ಷೆ ನೀಡಿದರೆಂದು ಯಾರೂ ವಾದಿಸಲು ಸಾಧ್ಯವಿಲ್ಲ.
ತಾನು ವ್ಯಬಿಚಾರ ಮಾಡಿದ್ದೇನೆ ಎಂದು ಖುದ್ದು ನಾಲ್ಕು ಬಾರಿ ಆಣೆ ಹಾಕಿ ಹೇಳಿದ ವ್ಯಕ್ತಿಯನ್ನು ಸಹ ಕಲ್ಲೆಸೆದು ಕೊಲ್ಲುವಂತೆ ಆದೇಶಿಸಿದ್ದರು ರಹ್ಮತುಲ್ ಆಲಮೀನ್ ಆದ ಪ್ರವಾದಿಯವರು! ( ಸಹಿ ಬುಕಾರಿ 6814)

ಇಬ್ನ್ ಮಾಜ -1944 ಹದೀಸ್, ಸಹಿ ಮುಸ್ಲಿಂ 1691a, ಸಹಿ ಮುಸ್ಲಿಂ 1452a ಮೊದಲಾದ  ಅಧಿಕೃತ ಹದೀಸಿನಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ- ಅಂದು ಕಲ್ಲೆಸೆದು ಕೊಲ್ಲಿಸುವ ಮತ್ತು 10 ಬಾರಿ ಸ್ಥನಪಾನದ ಆಯತ್ತು ಇತ್ತೆಂದು .
ಪ್ರವಾದಿಯವರು ಮರಣ ಹೊಂದಿದ ಸಂದರ್ಭದಲ್ಲಿ ಎಲ್ಲರೂ ಅದರಲ್ಲಿ ಕಾರ್ಯನಿರತವಾಗಿರುವಾಗ ಯಾವುದೋ ಬೀದಿ ಕುರಿಯೊಂದು ಬಂದು

ಆಯಿಷಾ ರವರ ತಲೆದಿಂಬಿನ ಕೆಳಗೆ ಇಡಲಾಗಿದ್ದ ಆ ಆಯತನ್ನು ತಿಂದು ಹಾಕಿತೆಂದೂ ಆಯಿಷರವರು ವರದಿ ಮಾಡಿದ್ದಾರೆ ( ಸುನನ್ ಇಬ್ನ್ ಮಾಜ 1944)

ಇವೆಲ್ಲವೂ ಮುತಫಕ್ಕುನ್ ಅಲೆಹಿ (ಅಂದರೆ ಇಸ್ಲಾಮಿನ ‘ಸಿಯಾವು-ಸಿತ್ತ’ ಎಂಬ ಆರು ಅಧಿಕೃತ ಹದೀಸ್ ಪಂಡಿತರಲ್ಲಿ ಬಹುತೇಕ ಪಂಡಿತರೂ ಒಪ್ಪಿರುವಂತಹ   ಹದೀಸ್ ಗಳು) ಹದೀಸ್ ಗಳಾಗಿವೆ. ಇವುಗಳನ್ನು ತಿರಸ್ಕರಿಸಲು ಇತರೆ ಇರುವ ಮಾನದಂಡಗಳೂ ಇಲ್ಲ.

ಕುರಾನ್ ನಲ್ಲಿ ಈ ಆಯತ್ ಗಳು ಇಲ್ಲವೆಂಬುದೂ ಕೂಡ ಈಗ ಮಾನದಂಡವಾಗುವುದಿಲ್ಲ. ಯಾಕೆಂದರೆ
ಕೇವಲ ಕುರಾನ್ ಇಟ್ಟುಕೊಂಡೇ ಧರ್ಮವನ್ನು ಆಚರಿಸುವುದು ಅಸಾಧ್ಯವೆ ಸರಿ, ನಾವು ಇಂದು ನಿರ್ವಹಿಸುತ್ತಿರುವ ಐದು ಬಾರಿಯ ನಮಾಜ್ ಮಾಡಬೇಕೆಂಬುದು ಕೂಡ ಕುರಾನಿನ ಯಾವುದೇ ಸಿಂಗಲ್ ಆಯತಿನಲ್ಲಿ ಇಲ್ಲ. ಗರಿಷ್ಠ ಮೂರು ಬಾರಿ ನಮಾಜ್ ಮಾಡಬೇಕೆಂಬ ಆಯತ್ ಸಿಗಬಹುದಷ್ಟೇ. ಅಥವಾ ನಮಾಜ್ ಮಾಡಬೇಕಾದ ರೀತಿ ನೀತಿಗಳನ್ನು ಕೂಡ ಕುರಾನ್ ಎಲ್ಲಿಯೂ ಹೇಳಿಲ್ಲ.
ಇಸ್ಲಾಮಿನ ಪ್ರದೇಶ ದ್ವಾರವಾದ ಶಹಾಧ ಕಲಿಮ ಕೂಡ ಕುರಾನಿನಲ್ಲಿಲ್ಲ. ಮುಂಜಿ ಮಾಡಬೇಕೆಂದು ಇಲ್ಲ .ಗಡ್ಡ ಬಿಡಬೇಕೆಂದೂ ಮೀಸೆ ಮುಂಡನ ಮಾಡಬೇಕೆಂದೂ ಕುರಾನಿನಲ್ಲಿ ಇಲ್ಲ !ಅಜರುಲ್ ಅಸ್ವಧ್ ಕಪ್ಪು ಕಲ್ಲಿನ ಬಗ್ಗೆ ಕುರಾನಿನಲ್ಲಿ ಇಲ್ಲ .ಝಂ ಝಂ ತೀರ್ಥ ಜಲದ ಬಗ್ಗೆ ಪ್ರಸ್ತಾಪವಿಲ್ಲ. ಕಬರ್ ಶಿಕ್ಷೆ (ಗೋರಿಯೊಳಗಿನ ಪ್ರಶ್ನೋತ್ತರಗಳು) ಕುರಾನಿನಲ್ಲಿ ಇಲ್ಲ. ನಮಾಜ್ ಪೂರ್ವದ ಅಜಾನ್ ಸಹ ಕುರಾನಿನಲ್ಲಿಲ್ಲ!
ಅಲ್ಲೆಲ್ಲಾ ನಾವು ಸಂಪೂರ್ಣವಾಗಿ ಹದೀಸ್ ಗಳನ್ನು ಅವಲಂಬಿಸಿದ್ದೇವೆ.

Exmuslims of Karnataka

Similar Posts

  • ಕುರಾನ್ ಹುಟ್ಟಿದ ಕಥೆ 1

    ಕುರಾನ್ – ಅರೇಬಿಕ್ ಪದಗಳ ಶಬ್ದ ನಿಷ್ಪತ್ತಿ [ ಶಬ್ದಾರ್ಥ ಮೂಲ ] ಮತ್ತು ಕುರಾನಿನ ಸಂಯೋಜನೆ. ಕುರಾನ್ ಎಂಬ ಪದ ಬಂದದ್ದೆಲ್ಲಿಂದ ? ಅದರ ಅರ್ಥವೇನು ? ಕುರಾನಿನ ಮೂಲ ಪುಸ್ತಕ ಲೋಹದ ಹಾಳೆಗಳ ಸಹಿತ ಅಲ್ಲಾಹು ಹೊಲಿದು ಮೇಲೆ ಇಟ್ಟುಕೊಂಡಿದ್ದಾನಂತೆ ! ಅದನ್ನು ಲಾಹುಲ್ ಮಹ್ಫುಝ್-Lawh al-Mahfuz(اللوح المحفوظ) ಎಂದು ಕರೆಯಲಾಗಿದೆ.(ಕು 85:22) ಆ ಪುಸ್ತಕದಲ್ಲಿ ಕುರಾನಿನ ಆಯತುಗಳನ್ನು ಬರೆದಿಟ್ಟು ಆ ಲೇಖನಿಯು ವಿಶ್ರಾಂತಿಗೆ ಹೋಗಿದೆಯಂತೆ! ಕುರಾನಿನ ಅರ್ಥ “ಪಠಿಸು” : ಅಂದರೆ ಇಂಗ್ಲೀಷಿನಲ್ಲಿ…

  • ಕುರಾನ್ 2.223 ರ ವ್ಯಾಖ್ಯಾನ

    ವಿಗ್ರಹಾರಾಧಕರಾಗಿದ್ದ ಅನ್ಸಾರ್‌ಗಳು(ಮದೀನಾದ ಪೈಗಂಬರ್ ಅನುಯಾಯಿಗಳು) ಮತ್ತು ಅಹ್ಲುಲ್‌ ಕಿತಾಬ್‌ಗಳಾದ ಯಹೂದರು ಜೊತೆಯಾಗಿ ಮದಿನಾದಲ್ಲಿ ವಾಸಿಸುತ್ತಿದ್ದರು. ಯಹೂದರು ತಮಗಿಂತ ಹೆಚ್ಚಿನ ಜ್ಞಾನವನ್ನು ಹೊಂದಿದ್ದಾರೆಂದು ಅನ್ಸಾರ್‌ಗಳು ನಂಬಿದ್ದರು. ಹಾಗಾಗಿ ಅವರ ಅನೇಕ ಆಚಾರ ವಿಚಾರಗಳನ್ನು ತಮ್ಮಲ್ಲಿ ಅಳವಡಿಸಿಕೊಂಡಿದ್ದರು. ಯಹೂದಿಯರ ಪ್ರಕಾರ ಪತ್ನಿಯರನ್ನು ಅವಳ ಯೋನಿಗೆ ಅವಳ ಹಿಂಭಾಗದಿಂದ(dogy style ನಲ್ಲಿ) ಸಂಭೋಗಿಸಿದರೆ ಮೆಳ್ಳೆಗಣ್ಣಿನ ಮಗು ಹುಟ್ಟುತ್ತದೆ ಎಂಬ ನಂಬಿಕೆ ಹೊಂದಿದ್ದರು. ಹಾಗಾಗಿ ಒಂದು ಕೋನದಿಂದ ಮಾತ್ರ ಸಂಭೋಗಿಸುತಿದ್ದರು. ಅಂದರೆ ಆಕೆಯನ್ನು ಅಂಗಾತಮಲಗಿಸಿ ಆಕೆಯನ್ನು ಸಂಪೂರ್ಣ ಮರೆಮಾಚುವ ವಿಧದಲ್ಲಿ ಆಕೆಯ ಮೇಲೆ…

  • ಕುರಾನಿನಲ್ಲಿರುವ ಅಂತರ್-ವಿರೋಧಗಳು; ಭಾಗ 1

    ನರಕವಾಸಿಗಳ ಆಹಾರವೇನು ? ಕುರಾನ್ ಯಾವ ರೀತಿಯ ಪವಿತ್ರ ಪುಸ್ತಕ ಎಂದು ನನಗೆ ತಿಳಿಯುತ್ತಿಲ್ಲ. ಅದರ ಬೋಧನೆಗಳಲ್ಲೇ ಪರಸ್ಪರ ವಿರೋಧಾಭಾಸಗಳು, ಗೊಂದಲಗಳು, ಅಂತರ್ವಿರೋಧಗಳು, ತಪ್ಪುಗಳು, ತೊಡಕುಗಳಿವೆ. ಕುರಾನ್ ನರಕವಾಸಿಗಳ ಆಹಾರದ ಕುರಿತಾಗಿ ಒಂದು ಕಡೆ ಹೀಗೆ ಹೇಳುತ್ತದೆ: ಅಲ್ ಗಾಶಿಯಾ(88).6- ಲೈಸ ಲಹುಮ್ ತ’ಅಮುನ್ ಇಲ್ಲಾ ಮಿನ್ ದರೀ’——ಮುಳ್ಳಿನ ಗಿಡದ ಹೊರತು ಬೇರೆ ಯಾವ ಆಹಾರವೂ ಅವರಿಗೆ(ನರಕವಾಸಿಗಳಿಗೆ) ಸಿಗದು. ಈ ಆಯತಿನಲ್ಲಿ ಹೇಳಿರುವಂತೆ ನರಕವಾಸಿಗಳ ಆಹಾರ “ಕೇವಲ ಮುಳ್ಳಿನ ಗಿಡ ಮಾತ್ರ”. ಇದರ ಹೊರತು ಮತ್ಯಾವ ಆಹಾರವೂ…

  • ಕುರಾನಿನಲ್ಲಿರುವ ಅಂತರ್-ವಿರೋಧಗಳು; ಭಾಗ 2

    ಕುರಾನಿನಲ್ಲಿರುವ ದ್ವಂದ್ವಗಳು, ವೈರುಧ್ಯಗಳು, ವಿರೋಧಾಭಾಸಗಳು, ತಪ್ಪುಗಳು ಮತ್ತು ಅತಾರ್ಕಿಕಕ ವಿಷಯಗಳನ್ನೆಲ್ಲಾ ತೆಗೆದು ಹಾಕಿದರೆ ಕುರಾನಿನಲ್ಲಿ ಏನು ಉಳಿದಿರುತ್ತದೆ ? ಬಹುಶಃ ಇವುಗಳ ಹೊರತಾಗಿ ಕುರಾನೇ ಇರುವುದಿಲ್ಲ. ಏಕೆಂದರೆ ಇವೆಲ್ಲವುಗಳಿಂದ ತುಂಬಿರುವುದೇ ಕುರಾನ್. ಅಲ್ಲಾಹನ ಹೊರತಾಗಿ ಬೇರೆ ಯಾವ ನ್ಯಾಯಾಧೀಶನಾಗಲಿ, ತೀರ್ಪುಗಾರನಾಗಲಿ ಇಲ್ಲ ಮತ್ತು ಆತ ತನ್ನ ನಿರ್ಧಾರ ಅಥವಾ ಆಡಳಿತದಲ್ಲಿ ಯಾರನ್ನೂ ಪಾಲುದಾರಾನನ್ನಾಗಿ ಮಾಡಲು ಅವನು ಅನುಮತಿಸುವುದಿಲ್ಲ ಎಂದು ಕುರಾನ್ ಈ ಆಯತುಗಳಲ್ಲಿ ಹೇಳುತ್ತದೆ; ಅಲ್ ಅನ್‌ಆಮ್(6).114—‘‘ಅವನು (ಅಲ್ಲಾಹನು) ಸವಿಸ್ತಾರವಾದ ಗ್ರಂಥವನ್ನು ನಿಮ್ಮೆಡೆಗೆ ಇಳಿಸಿಕೊಟ್ಟಿರುವಾಗ, ನಾನೇನು ಅಲ್ಲಾಹನನ್ನು…

  • |

    DEBUNKING OF “ಕುರಾನ್ ಭ್ರೂಣಶಾಸ್ತ್ರ “

    ಅಧ್ಯಾಯ 3: ಆಲಿ ಇಮ್ರಾನ್ (ಇಮ್ರಾನರ ಸಂತತಿ)ಸೂಕ್ತ : 7 “ಅವನೇ, ಈ ಗ್ರಂಥವನ್ನು ನಿಮಗೆ ಇಳಿಸಿಕೊಟ್ಟವನು. ಇದರಲ್ಲಿ ಖಚಿತ ವಚನಗಳಿವೆ – ಅವುಗಳೇ ಈ ಗ್ರಂಥದ ಸಾರ. ಇನ್ನು, ಇದರಲ್ಲಿ ಬಹು ಅರ್ಥದ ವಚನಗಳೂ ಇವೆ. ತಮ್ಮ ಮನಸ್ಸುಗಳಲ್ಲಿ ವಕ್ರತೆ ಉಳ್ಳವರು, ಈ ಪೈಕಿ ಬಹು ಅರ್ಥದ ವಚನಗಳ ಹಿಂದೆ ನಡೆಯುತ್ತಾರೆ. ಅವರು ಈ ಮೂಲಕ ಗೊಂದಲದ ಬೆನ್ನು ಹಿಡಿಯುತ್ತಾರೆ ಮತ್ತು ವಿಕೃತ ವ್ಯಾಖ್ಯಾನಗಳನ್ನು ಅರಸುತ್ತಿರುತ್ತಾರೆ. ನಿಜವಾಗಿ, ಅವುಗಳ ಸರಿಯಾದ ವ್ಯಾಖ್ಯಾನವನ್ನು ಬಲ್ಲವನು ಅಲ್ಲಾಹನ ಹೊರತು…

  • ಏಕ್ ಔರ್ ದಕ್ಕಾ, ಕುರಾನ್ ಫೇಲ್ ಪಕ್ಕಾ! [ಕುರಾನಿನ ಸುಳ್ಳು ಪ್ರತಿಪಾದನೆಗಳು]

    ಕುರಾನ್ ಆಗಲಿ ಅದರಿಂದ ಇಸ್ಲಾಮ್ ಆಗಲಿ ತನ್ನದು ಎನ್ನಬಹುದಾದ original- ಸೃಜನಾತ್ಮಕವಾದ ಶುದ್ಧ ಆಚಾರ ವಿಚಾರಗಳನ್ನು ಸೃಷ್ಟಿಸಿಯೇ ಇಲ್ಲ. ಎಲ್ಲವೂ ಅಲ್ಲಿಂದ ಇಲ್ಲಿಂದ ಆಯ್ದ ಬಟ್ಟೆಯ ಚೂರುಗಳನ್ನು ಸೇರಿಸಿ ಹೊಲಿದ ಕೌದಿಯ ರೂಪದಲ್ಲಿದೆ ಈ ಕುರಾನ್ ಮತ್ತು ಇಸ್ಲಾಮ್. ಹಾಗಾಗಿಯೇ ಇಸ್ಲಾಮನ್ನು bandaid religion ಎಂದೂ ಕರೆಯುವುದುಂಟು. ಒಡ್ಡಿದ ಪರೀಕ್ಷೆಯಲ್ಲಿ ಹಿನಾಯವಾಗಿ ಸೋಲುವ ದಡ್ಡವಿದ್ಯಾರ್ಥಿಯಂತಿದೆ ಇಸ್ಲಾಮ್. ತಾನು ಸೋತರೆ ಔಟ್ ಆದರೆ ಬಾಲ್ ಒಡೆದು, ವಿಕೆಟ್ ಮುರಿದು ಹಾಕುವಂಥ ದೌಷ್ಟ್ರ್ಯ ಇಲ್ಲಿರುತ್ತದೆ. ಈ ಹಿಂದೆ, ಇಸ್ಲಾಮಿನ ಮೂಲ…

Leave a Reply

Your email address will not be published. Required fields are marked *